ಕರೂರು ಕಾಲ್ತುಳಿತ ಪ್ರಕರಣ- ನಟ ವಿಜಯ್‌ಗೆ ಸಿಬಿಐ ಸಮನ್ಸ್
x
ನಟ ವಿಜಯ್‌

ಕರೂರು ಕಾಲ್ತುಳಿತ ಪ್ರಕರಣ- ನಟ ವಿಜಯ್‌ಗೆ ಸಿಬಿಐ ಸಮನ್ಸ್

ಕರೂರು ಕಾಲ್ತುಳಿತ ಪ್ರಕರಣದಲ್ಲಿ 41 ಜನರ ಸಾವಿಗೆ ಸಂಬಂಧಿಸಿದಂತೆ ಸಿಬಿಐ ಈಗ ನಟ ವಿಜಯ್ ಅವರಿಗೆ ಸಮನ್ಸ್ ನೀಡಿದೆ. ಜನವರಿ 12ರಂದು ವಿಚಾರಣೆ ನಡೆಯಲಿದೆ.


Click the Play button to hear this message in audio format

ತಮಿಳುನಾಡಿನ ಕರೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಸಂಸ್ಥಾಪಕ ವಿಜಯ್ ಅವರಿಗೆ ಸಿಬಿಐ (CBI) ಸಮನ್ಸ್ ಜಾರಿ ಮಾಡಿದೆ. ಜನವರಿ 12 ರಂದು ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಹಿನ್ನೆಲೆ

2025ರ ಸೆಪ್ಟೆಂಬರ್ 27ರಂದು ಕರೂರ್ ಜಿಲ್ಲೆಯ ವೇಲುಸ್ವಾಮಿಪುರಂನಲ್ಲಿ ನಡೆದ ಟಿವಿಕೆ ರಾಜಕೀಯ ರ್ಯಾಲಿಯ ವೇಳೆ ಭೀಕರ ನೂಕುನುಗ್ಗಲು ಉಂಟಾಗಿ, ಕಾಲ್ತುಳಿತ ಸಂಭವಿಸಿತ್ತು. ವಿಜಯ್ ಅವರ ಭಾಷಣ ಕೇಳಲು ಜಮಾಯಿಸಿದ್ದ ಹತ್ತಾರು ಸಾವಿರ ಅಭಿಮಾನಿಗಳ ನಡುವೆ ಉಂಟಾದ ಈ ತುಳಿತದಲ್ಲಿ 41 ಮಂದಿ ಪ್ರಾಣ ಕಳೆದುಕೊಂಡಿದ್ದರು ಮತ್ತು ಅನೇಕರು ಗಾಯಗೊಂಡಿದ್ದರು.

ತನಿಖೆಯ ಹಾದಿ

ಆರಂಭದಲ್ಲಿ ತಮಿಳುನಾಡು ಸರ್ಕಾರವು ಈ ಪ್ರಕರಣವನ್ನು ವಿಶೇಷ ತನಿಖಾ ತಂಡದ (SIT) ಮೂಲಕ ತನಿಖೆ ನಡೆಸಲು ಮುಂದಾಗಿತ್ತು ಮತ್ತು ಸಿಬಿಐ ತನಿಖೆಯನ್ನು ವಿರೋಧಿಸಿತ್ತು.

ಸುಪ್ರೀಂ ಕೋರ್ಟ್ ಹಸ್ತಕ್ಷೇಪ

ಈ ದುರಂತವು "ರಾಷ್ಟ್ರದ ಆತ್ಮಸಾಕ್ಷಿಯನ್ನು ಅಲುಗಾಡಿಸಿದೆ" ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತು. ತನಿಖೆಯನ್ನು ಕೈಗೆತ್ತಿಕೊಂಡ ಸಿಬಿಐ ಈಗಾಗಲೇ ಟಿವಿಕೆ ಪಕ್ಷದ ಪ್ರಮುಖ ಪದಾಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಈಗ ನೇರವಾಗಿ ವಿಜಯ್ ಅವರನ್ನು ಪ್ರಶ್ನಿಸಲು ಮುಂದಾಗಿದೆ. ಸಿಬಿಐ ಪ್ರಮುಖವಾಗಿ ಕಾರ್ಯಕ್ರಮಕ್ಕೆ ನೀಡಲಾದ ಅನುಮತಿಗಳು, ಜನಸಂದಣಿ ನಿರ್ವಹಣಾ ಕ್ರಮಗಳು ಪೊಲೀಸ್ ನಿಯೋಜನೆ ಮತ್ತು ತುರ್ತು ಪ್ರತಿಕ್ರಿಯೆಯಲ್ಲಿನ ವೈಫಲ್ಯಗಳ ಬಗ್ಗೆ ತನಿಖೆ ನಡೆಸುತ್ತಿದೆ.


Read More
Next Story