Commonwealth Speakers Conference in Bengaluru: U.T. Khader
x

ಲೋಕಸಭೆ ಸಭಾಪತಿ ಓಂ ಬಿರ್ಲಾ ಅವರನ್ನು ರಾಜ್ಯ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್‌ ಭೇಟಿ ಮಾಡಿದರು.

ಕಾಮನ್‌ವೆಲ್ತ್ ಸಂಸದೀಯ ಸಂಘದ 11ನೇ ಸಮ್ಮೇಳನಕ್ಕೆ ಕರ್ನಾಟಕ ಆತಿಥ್ಯ: ಓಂ ಬಿರ್ಲಾಗೆ ಖಾದರ್ ಕೃತಜ್ಞತೆ

ಸೆಪ್ಟೆಂಬರ್ 9 ಮತ್ತು 10ರಂದು ನಡೆಯುವ ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ವಿಧಾನಸಭೆ ಸಭಾಧ್ಯಕ್ಷರುಗಳು ಹಾಗೂ ಅಂತರಾಷ್ಟ್ರೀಯ ಮಟ್ಟದ ಕಾಮನ್ ವೆಲ್ತ್ ದೇಶಗಳ ಸಭಾಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್‌ ತಿಳಿಸಿದರು.


ಕಾಮನ್‌ವೆಲ್ತ್ ಸಂಸದೀಯ ಸಂಘ, ಭಾರತ ವಲಯದ 11ನೇ ಸಮ್ಮೇಳನವನ್ನು ಆಯೋಜಿಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಲೋಕಸಭೆ ಸಭಾಪತಿ ಓಂ ಬಿರ್ಲಾ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಬುಧವಾರ ನವದೆಹಲಿಯಲ್ಲಿ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಖಾದರ್ ಈ ವಿಷಯ ತಿಳಿಸಿದರು.

ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿರುವ ಈ ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ವಿಧಾನಸಭೆ ಸಭಾಧ್ಯಕ್ಷರು ಭಾಗವಹಿಸಲಿದ್ದಾರೆ. ವಿಶೇಷವಾಗಿ, ಪ್ರಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಕಾಮನ್‌ವೆಲ್ತ್ ದೇಶಗಳ ಸಭಾಧ್ಯಕ್ಷರನ್ನು ಆಹ್ವಾನಿಸುವ ಕುರಿತು ಮತ್ತು ಸಮ್ಮೇಳನದಲ್ಲಿ ಚರ್ಚಿಸಬೇಕಾದ ವಿಷಯಗಳ ಬಗ್ಗೆ ಉಭಯ ನಾಯಕರು ಸಮಾಲೋಚನೆ ನಡೆಸಿದರು.

ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 8 ರಂದು ಬೆಂಗಳೂರಿನ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ನಡೆಸುವ ಬಗ್ಗೆ ಖಾದರ್ ಅವರು ಓಂ ಬಿರ್ಲಾ ಅವರಿಗೆ ಮಾಹಿತಿ ನೀಡಿದರು. ಅಲ್ಲದೆ, ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಅನೇಕ ಪ್ರಗತಿಪರ ಬದಲಾವಣೆಗಳನ್ನು ಸಹ ಲೋಕಸಭಾಧ್ಯಕ್ಷರ ಗಮನಕ್ಕೆ ತಂದರು.

ಕರ್ನಾಟಕದ ಇತಿಹಾಸದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಇಂತಹ ಸಮ್ಮೇಳನವನ್ನು ಆಯೋಜಿಸಲು ಸಿಕ್ಕಿರುವ ಅವಕಾಶಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಭರವಸೆ ನೀಡಿದರು.

Read More
Next Story