ಪ್ರಧಾನಿ ಅವರಿಂದ ಪಿಎಂ ಕಿಸಾನ್‌ ನಿಧಿ ಕಂತು 20,000 ಕೋಟಿ ರೂ. ಬಿಡುಗಡೆ
x

ಪ್ರಧಾನಿ ಅವರಿಂದ ಪಿಎಂ ಕಿಸಾನ್‌ ನಿಧಿ ಕಂತು 20,000 ಕೋಟಿ ರೂ. ಬಿಡುಗಡೆ


ವಾರಣಾಸಿ (ಉತ್ತರಪ್ರದೇಶ), ಜೂನ್ 18- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 9.26 ಕೋಟಿಗೂ ಹೆಚ್ಚು ರೈತರಿಗೆ ಆದಾಯ ಬೆಂಬಲ ಯೋಜನೆಯಡಿ 20,000 ಕೋಟಿ ರೂ. ಬಿಡುಗಡೆ ಮಾಡಿದರು.

ಪ್ರಧಾನಿ ಅವರು ವಾರಣಾಸಿಯಲ್ಲಿ ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಈ ಮೊತ್ತ ಬಿಡುಗಡೆ ಮಾಡಿದರು. ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕ್ಷೇತ್ರಕ್ಕೆ ಅವರ ಮೊದಲ ಭೇಟಿ ಇದಾಗಿದೆ.

ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಿಸಾನ್ ಸಮ್ಮಾನ್ ನಿಧಿಯ 17 ನೇ ಕಂತಿನ ಬಿಡುಗಡೆ ಕುರಿತ ಮೊದಲ ಕಡತಕ್ಕೆ ಅವರು ಸಹಿ ಹಾಕಿದ್ದರು. ಆಬಳಿಕ ನೇರ ಲಾಭ ವರ್ಗಾವಣೆ ಮೂಲಕ 9.26 ಕೋಟಿ ರೈತರಿಗೆ 20,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಕಂತು ಬಿಡುಗಡೆಯಾಗಿದೆ.

ಪ್ರಧಾನಿ ಮೋದಿ ಅವರನ್ನು ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಮತ್ತಿತರರು ಸ್ವಾಗತಿಸಿದರು.

Read More
Next Story