ಪ್ರಧಾನಿ ಭೇಟಿಯಾದ ಕೇರಳ ಸಿಎಂ
x

ಪ್ರಧಾನಿ ಭೇಟಿಯಾದ ಕೇರಳ ಸಿಎಂ


ತಿರುವನಂತಪುರಂ/ನವದೆಹಲಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರದ ಈ ಭೇಟಿಯು ಔಪಚಾರಿಕವಾದುದು ಎಂದು ಮೂಲಗಳು ತಿಳಿಸಿವೆ.

ʻಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು,ʼ ಎಂದು ಪಿಎಂಒ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದೆ.

ತಿರುವನಂತಪುರದಲ್ಲಿರುವ ಮುಖ್ಯಮಂತ್ರಿಗಳ ಕಚೇರಿ ಬಿಡುಗಡೆ ಮಾಡಿದ ಫೋಟೋದಲ್ಲಿ ಮುಖ್ಯಮಂತ್ರಿ ವಿಜಯನ್‌ ಅವರು ಪ್ರಧಾನಿ ಅವರಿಗೆ ಶ್ರೀ ಪದ್ಮನಾಭ ಸ್ವಾಮಿಯ ವಿಗ್ರಹವನ್ನು ಕಾಣಿಕೆಯಾಗಿ ನೀಡುತ್ತಿರುವುದನ್ನು ಕಾಣಬಹುದು.

ಭೂಕುಸಿತದಿಂದ ತತ್ತರಿಸಿರುವ ವಯನಾಡಿನ ಪುನರ್ವಸತಿ ಕುರಿತು ಸಭೆಯಲ್ಲಿ ಚರ್ಚೆ ಆಗಿದೆಯೇ ಎನ್ನುವುದು ದೃಢಪಟ್ಟಿಲ್ಲ.

Read More
Next Story