Wayanad Landslide| ಹಾನಿಗೀಡಾದ ಕುಟುಂಬಗಳಿಗೆ ತುರ್ತು ಆರ್ಥಿಕ ನೆರವು
x

Wayanad Landslide| ಹಾನಿಗೀಡಾದ ಕುಟುಂಬಗಳಿಗೆ ತುರ್ತು ಆರ್ಥಿಕ ನೆರವು


ತಿರುವನಂತಪುರಂ: ವಯನಾಡು ಜಿಲ್ಲೆಯ ಮುಂಡಕ್ಕೈ ಮತ್ತು ಚೂರಲ್ಮಲಾ ಗ್ರಾಮಗಳಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಲ್ಲಿ ಮನೆ ಕಳೆದುಕೊಂಡಿರುವವರಿಗೆ ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ಆರ್ಥಿಕ ನೆರವು ನೀಡುವುದಾಗಿ ಕೇರಳ ಸರ್ಕಾರ ಶುಕ್ರವಾರ ಘೋಷಿಸಿದೆ. ಈ ಪ್ರದೇಶಗಳಲ್ಲಿರುವ, ದುರಂತದಿಂದ ಸಂತ್ರಸ್ತರಾದ ಎಲ್ಲರಿಗೂ ಈ ನೆರವು ಲಭ್ಯವಾಗಲಿದೆ.

ವಿಪತ್ತಿನಿಂದ ತಮ್ಮ ಆದಾಯದ ಮೂಲವನ್ನು ಕಳೆದುಕೊಂಡಿರುವ ಕುಟುಂಬಗಳ ವಯಸ್ಕರಿಗೆ ಸರ್ಕಾರ ದಿನಕ್ಕೆ 300 ರೂ., ನೀಡಲಿದ್ದು, ಇದು ಪ್ರತಿ ಕುಟುಂಬದ ಇಬ್ಬರು ಸದಸ್ಯರಿಗೆ ಸೀಮಿತವಾಗಿರುತ್ತದೆ. ಕುಟುಂಬದ ಸದಸ್ಯರು ಗಂಭೀರ ಅನಾರೋಗ್ಯಕ್ಕೆ ಈಡಾಗಿದ್ದರೆ ಅಥವಾ ಆಸ್ಪತ್ರೆಗೆ ದಾಖಲಾಗಿದ್ದರೆ, ಈ ಪ್ರಯೋಜನವನ್ನು ಮೂವರಿಗೆ ವಿಸ್ತರಿಸಲಾಗುತ್ತದೆ. ಗರಿಷ್ಠ 30 ದಿನ ಈ ನೆರವು ನೀಡಲಾಗುತ್ತದೆ. ಪರಿಹಾರ ಶಿಬಿರದಲ್ಲಿ ವಾಸಿಸುತ್ತಿರುವ ಪ್ರತಿ ಕುಟುಂಬಕ್ಕೆ 10,000 ರೂ. ತುರ್ತು ಆರ್ಥಿಕ ನೆರವು ನೀಡಲಾಗುತ್ತದೆ.

ದುರಂತದಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರಿ ಸ್ವಾಮ್ಯದ ಅಥವಾ ಸಾರ್ವಜನಿಕ ಒಡೆತನದ ಆಸ್ತಿಯಲ್ಲಿ ವಸತಿ ಸೌಲಭ್ಯ ಒದಗಿಸುವ ಸಾಧ್ಯತೆಯನ್ನು ಸರ್ಕಾರ ಅನ್ವೇಷಿಸುತ್ತಿದೆ. ಈ ಕುರಿತು ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದು, ವರದಿ ಬಂದ ನಂತರ ಸರಕಾರವು ಬಾಡಿಗೆ ನಿಗದಿ ಮಾಡಿ ನೆರವು ನೀಡಲಿದೆ.

ವಯನಾಡಿನಲ್ಲಿ ಜುಲೈ 30 ರಂದು ಸಂಭವಿಸಿದ ಭಾರೀ ಭೂಕುಸಿತದಲ್ಲಿ 226 ಜನರು ಸಾವನ್ನಪ್ಪಿದ್ದಾರೆ ಮತ್ತು 130 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

Read More
Next Story