Delhi Elections : ಕಡತ, ದಾಖಲೆಗಳನ್ನ ದೆಹಲಿ ಸಚಿವಾಲಯದಿಂದ ಹೊರಕ್ಕೆ ತರದಂತೆ ಜಿಎಡಿ ಆದೇಶ
x
ದೆಹಲಿ ಆಡಳಿತ ಕಚೇರಿ.

Delhi Elections : ಕಡತ, ದಾಖಲೆಗಳನ್ನ ದೆಹಲಿ ಸಚಿವಾಲಯದಿಂದ ಹೊರಕ್ಕೆ ತರದಂತೆ ಜಿಎಡಿ ಆದೇಶ

Delhi Elections :ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಯ (ಜಿಎಡಿ) ಪೂರ್ವಾನುಮತಿ ಇಲ್ಲದೆ ಯಾವುದೇ ಕಡತ, ದಾಖಲೆ, ಕಂಪ್ಯೂಟರ್ ಹಾರ್ಡ್‌ವೇರ್‌ಗಳನ್ನು ತೆಗೆದುಕೊಂಡು ಹೋಗುವಂತಿಲ್ಲ ಮತ್ತು ಡಿಲೀಟ್​ ಮಾಡುವಂತಿಲ್ಲ.


ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ, ಅಲ್ಲಿನ ಸಚಿವಾಲಯದಿಂದ ಯಾವುದೇ ಕಡತಗಳು, ದಾಖಲೆಗಳು ಮತ್ತು ಕಂಪ್ಯೂಟರ್‌ಗಳನ್ನು ಹೊರಕ್ಕೆ ತರಬಾರದು ಎಂದು ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಶನಿವಾರ ಸೂಚನೆ ನೀಡಿದ್ದಾರೆ.

ಕಡತಗಳ ಗೌಪ್ಯತೆಯ ಸುರಕ್ಷತೆ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ. ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಯ (ಜಿಎಡಿ) ಪೂರ್ವಾನುಮತಿ ಇಲ್ಲದೆ ಯಾವುದೇ ಕಡತ, ದಾಖಲೆ, ಕಂಪ್ಯೂಟರ್ ಹಾರ್ಡ್‌ವೇರ್‌ಗಳನ್ನು ತೆಗೆದುಕೊಂಡು ಹೋಗುವಂತಿಲ್ಲ ಮತ್ತು ಡಿಲೀಟ್​ ಮಾಡುವಂತಿಲ್ಲ. ಈ ಕುರಿತು ದೆಹಲಿ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಇಲಾಖೆಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಆದೇಶದಲ್ಲಿ ಅವರು ತಿಳಿಸಿದ್ದಾರೆ.

ಆದೇಶವು ಸಚಿವ ಸಂಪುಟದ ಎಲ್ಲಾ ಇಲಾಖೆಗಳು, ಏಜೆನ್ಸಿಗಳು ಮತ್ತು ಕ್ಯಾಂಪ್‌ ಕಚೇರಿಗಳಿಗೆ ಅನ್ವಯವಾಗಲಿದೆ.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 27 ವರ್ಷಗಳ ನಂತರ ದೆಹಲಿಯಲ್ಲಿ ಗದ್ದುಗೆ ಹಿಡಿದಿದೆ. ಆಮ್ ಆದ್ಮಿ ಪಕ್ಷವು ಪರಾಭವಗೊಂಡಿದೆ. ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್‌ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ನಾಯಕರು ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಾರೆ. ಹೀಗಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

Read More
Next Story