ದೆಹಲಿ ಸ್ಫೋಟ: ಪ್ರಧಾನಿ ಮೋದಿ ಸಂತಾಪ, ಅಮಿತ್ ಶಾ ಜತೆ ಉನ್ನತ ಮಟ್ಟದ ಪರಿಶೀಲನೆ
x

ಸುಮಾರು 237 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತ ರಾಜ್ಯ ಮತ್ತು ಕೇಂದ್ರ ಪಡೆಗಳ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು.

ದೆಹಲಿ ಸ್ಫೋಟ: ಪ್ರಧಾನಿ ಮೋದಿ ಸಂತಾಪ, ಅಮಿತ್ ಶಾ ಜತೆ ಉನ್ನತ ಮಟ್ಟದ ಪರಿಶೀಲನೆ

ಸೋಮವಾರ ಸಂಜೆ ಸುಮಾರು 7 ಗಂಟೆಗೆ, ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿಯ ಕೆಂಪು ಸಿಗ್ನಲ್‌ನಲ್ಲಿ ನಿಂತಿದ್ದ ಹ್ಯುಂಡೈ i20 ಕಾರಿನಲ್ಲಿ ಈ ಪ್ರಬಲ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ 10 ಜನರು ಸ್ಥಳದಲ್ಲೇ ಮೃತಪಟ್ಟಿದ್ದರು.


Click the Play button to hear this message in audio format

ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಭೀಕರ ಕಾರ್ ಸ್ಫೋಟದಲ್ಲಿ 10 ಮಂದಿ ಸಾವನ್ನಪ್ಪಿ, 24 ಜನರು ಗಾಯಗೊಂಡಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಈ ಕುರಿತು 'X' (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, "ಇಂದು ಸಂಜೆ ದೆಹಲಿಯಲ್ಲಿ ನಡೆದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಅಧಿಕಾರಿಗಳು ಎಲ್ಲಾ ರೀತಿಯ ನೆರವು ನೀಡುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ," ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ

ಸೋಮವಾರ ಸಂಜೆ ಸುಮಾರು 7 ಗಂಟೆಗೆ, ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿಯ ಕೆಂಪು ಸಿಗ್ನಲ್‌ನಲ್ಲಿ ನಿಂತಿದ್ದ ಹ್ಯುಂಡೈ i20 ಕಾರಿನಲ್ಲಿ ಈ ಪ್ರಬಲ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ 10 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯ ನಂತರ, ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ದೆಹಲಿ ಮೆಟ್ರೋ ನಿಲ್ದಾಣಗಳು, ಸರ್ಕಾರಿ ಕಟ್ಟಡಗಳು ಮತ್ತು ಐಜಿಐ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈ ಪೊಲೀಸರು ಕೂಡ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿದ್ದಾರೆ. ಸ್ಫೋಟದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದು, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದಾರೆ.

Read More
Next Story