ಚೈತ್ರ ನವರಾತ್ರಿಯಲ್ಲಿ ಧಾರ್ಮಿಕ ಸ್ಥಳಗಳ 500 ಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿಸಿದ ಯುಪಿ ಸರ್ಕಾರ
x

ಚೈತ್ರ ನವರಾತ್ರಿಯಲ್ಲಿ ಧಾರ್ಮಿಕ ಸ್ಥಳಗಳ 500 ಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿಸಿದ ಯುಪಿ ಸರ್ಕಾರ

ಏಪ್ರಿಲ್ 6ರಂದು ರಾಮ ನವಮಿಗೆ ವಿಶೇಷ ನಿರ್ಬಂಧಗಳನ್ನು ವಿಧಿಸಲಾಗುವುದು. ಆ ದಿನ ಪ್ರಾಣಿಗಳ ವಧೆ ಮತ್ತು ಮಾಂಸದ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.


ಭಾನುವಾರದಿಂದ (ಮಾರ್ಚ್​ 30ರಂದು) ಆರಂಭವಾಗುವ ಒಂಬತ್ತು ದಿನಗಳ ಚೈತ್ರ ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಅಕ್ರಮ ಕಸಾಯಿಖಾನೆಗಳನ್ನು ಮುಚ್ಚುವಂತೆ ಮತ್ತು ಧಾರ್ಮಿಕ ಸ್ಥಳಗಳ 500 ಮೀಟರ್ ವ್ಯಾಪ್ತಿಯಲ್ಲಿ ಮಾಂಸದ ಮಾರಾಟ ನಿಷೇಧಿಸುವಂತೆ ಆದೇಶಿಸಿದೆ.

ಏಪ್ರಿಲ್ 6ರಂದು ರಾಮ ನವಮಿಗೆ ವಿಶೇಷ ನಿರ್ಬಂಧಗಳನ್ನು ವಿಧಿಸಲಾಗುವುದು. ಆ ದಿನ ಪ್ರಾಣಿಗಳ ವಧೆ ಮತ್ತು ಮಾಂಸದ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜಾತ್ ಅವರು ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಮತ್ತು ಪುರಸಭೆ ಆಯುಕ್ತರಿಗೆ ತಕ್ಷಣವೇ ಕಸಾಯಿಖಾನೆಗಳನ್ನು ಮುಚ್ಚಲು ಮತ್ತು ಧಾರ್ಮಿಕ ಸ್ಥಳಗಳ ಸಮೀಪ ಮಾಂಸದ ಮಾರಾಟದ ಮೇಲಿನ ನಿಷೇಧ ಜಾರಿಗೊಳಿಸಲು ನಿರ್ದೇಶನ ನೀಡಿದ್ದಾರೆ ಎಂದು ಯುಪಿ ಸರ್ಕಾರ ಶನಿವಾರದ ಹೇಳಿಕೆಯಲ್ಲಿ ತಿಳಿಸಿದೆ.

2014 ಮತ್ತು 2017 ರಲ್ಲಿ ಜಾರಿಗೊಳಿಸಿದ ಆದೇಶಗಳನ್ನು ಉಲ್ಲೇಖಿಸಿ, ಯೋಗಿ ಆದಿತ್ಯನಾಥ್ ಸರ್ಕಾರವು ಧಾರ್ಮಿಕ ಸ್ಥಳಗಳ ಬಳಿ ಅಕ್ರಮ ಪ್ರಾಣಿ ವಧೆ ಮತ್ತು ಮಾಂಸದ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಈ ನಿರ್ಧಾರವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ. ಇವುಗಳಲ್ಲಿ ಪೊಲೀಸ್, ಮಾಲಿನ್ಯ ನಿಯಂತ್ರಣ ಮಂಡಳಿ, ಪಶುಸಂಗೋಪನಾ ಇಲಾಖೆ, ಸಾರಿಗೆ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಮತ್ತು ಆಹಾರ ಸುರಕ್ಷತಾ ಆಡಳಿತದ ಅಧಿಕಾರಿಗಳು ಸೇರಿದ್ದಾರೆ.

ಯುಪಿ ಮುನ್ಸಿಪಲ್ ಕಾರ್ಪೊರೇಷನ್ ಆಕ್ಟ್ 1959 ಮತ್ತು ಆಹಾರ ಸುರಕ್ಷತಾ ಕಾಯಿದೆ 2006 ಹಾಗೂ 2011 ರ ನಿಬಂಧನೆಗಳ ಅಡಿಯಲ್ಲಿ, ಯೋಗಿ ಆದಿತ್ಯನಾಥ್ ಸರ್ಕಾರವು ಉಲ್ಲಂಘಕರ ವಿರುದ್ಧ ಕಠಿಣ ಶಿಕ್ಷಾತ್ಮಕ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಿದೆ ಎಂದು ಹೇಳಿಕೆ ತಿಳಿಸಿದೆ.

ದುರ್ಗಾ ದೇವಿಗೆ ಸಮರ್ಪಿತವಾದ ಒಂಬತ್ತು ದಿನಗಳ ಹಿಂದೂ ಹಬ್ಬವಾದ ನವರಾತ್ರಿ ಭಾನುವಾರ (ಮಾರ್ಚ್ 30) ರಿಂದ ಆರಂಭವಾಗಲಿದೆ.

Read More
Next Story