ಬಿಬಿಎಂಪಿ 3000 ಗುಂಡಿ ಮುಚ್ಚುವ ಕಾರ್ಯಾಚರಣೆ ಆರಂಭ

14 Sept 2024 1:17 PM GMT

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾನು ಒಂದು ವಾರಗಳ ಕಾಲ ಖಾಸಗಿ ಕೆಲಸದ ಮೇಲೆ ವಿದೇಶ ಪ್ರವಾಸ ಬೆಳೆಸುತ್ತಿದ್ದು, ನಾನು ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ 15 ದಿನದ ಗಡುವನ್ನು ನೀಡಿದ್ದರು. ಇದರಿಂದ ಎಚ್ಚೆತ್ತ ಬಿಬಿಎಂಪಿ ಇದೀಗ ಗುಂಡಿ ಮುಚ್ಚುವ ಅಭಿಯಾನ ಆರಂಭಿಸಿದೆ.