ಸಚಿವರ ಜತೆ ಸಭೆ ನಡೆಸಿ ಒಗ್ಗಟ್ಟಿನ ಸಂದೇಶ ರವಾನಿಸಿದ ಸಿಎಂ; ಸಚಿವರ ಸಭೆಯಲ್ಲಿ ಏನೇನಾಯ್ತು?

4 Dec 2025 7:47 PM IST

ಬೆಳಗಾವಿಯ ಅಧಿವೇಶನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಎಲ್ಲಾ ಸಚಿವರ ಜತೆ ಸಮಾಲೋಚನೆ ನಡೆಸಿದರು. ಸಚಿವರ ಸಭೆಯಲ್ಲಿ ಬೆಳಗಾವಿಯ ಅಧಿವೇಶನದಲ್ಲಿ ಪ್ರತಿಪಕ್ಷಗಳಿಗೆ ಯಾವ ರೀತಿ ತಿರುಗೇಟು ನೀಡಬೇಕೆಂದು ಸಮಾಲೋಚನೆ ನಡೆಯಿತು. ನಾಯಕತ್ವ ಬದಲಾವಣೆ ಗೊಂದಲಗಳ ನಡುವೆ ಸಿಎಂ ಸಿದ್ದರಾಮಯ್ಯ ಸಚಿವರ ಸಭೆ ನಡೆಸುವ ಮೂಲಕ ರಾಜಕೀಯ ಸಂದೇಶ ಕೂಡ ರವಾನೆ ಮಾಡಿದರು.