ಸುವರ್ಣಸೌಧದಲ್ಲಿ 'ನ್ಯಾಷನಲ್ ಹೆರಾಲ್ಡ್' ಕಿಚ್ಚು: ಕಾಂಗ್ರೆಸ್ ಎಚ್ಚರಿಕೆ ಏನು?

17 Dec 2025 3:17 PM IST

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ (National Herald Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ನಡೆಸುತ್ತಿರುವ ತನಿಖೆಯನ್ನು ಖಂಡಿಸಿ, ಬೆಳಗಾವಿಯ ಸುವರ್ಣಸೌಧದ ಗಾಂಧಿ ಪ್ರತಿಮೆಯ ಬಳಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಿದರು.ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ದ್ವೇಷ ಸಾಧಿಸುತ್ತಿದೆ ಎಂದು ಶಾಸಕರು ಆರೋಪಿಸಿದರು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಮೇಲಿನ ಪ್ರಕರಣವನ್ನು ಖಂಡಿಸಿ, ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವಿಡಿಯೋದಲ್ಲಿ, ಪ್ರತಿಭಟನೆಯ ಸಂಪೂರ್ಣ ವಾಕ್ ಥ್ರೂ (Walkthrough) ನೀಡಲಾಗಿದ್ದು, ಶಾಸಕರ ಆಕ್ರೋಶ, ಘೋಷಣೆಗಳು ಮತ್ತು ಅಲ್ಲಿನ ಪರಿಸ್ಥಿತಿಯ ನೇರ ಚಿತ್ರಣವನ್ನು ಕಟ್ಟಿಕೊಡಲಾಗಿದೆ.