LIVE | ಕುತೂಹಲ ಕೆರಳಿಸಿದ್ದ ಸಿದ್ದರಾಮಯ್ಯ, ಡಿ.ಕೆ.ಶಿ ಮತ್ತು ರಾಹುಲ್ ಗಾಂಧಿ ಭೇಟಿಯಲ್ಲಿ ಏನಾಯಿತು?

13 Jan 2026 7:22 PM IST

ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಮೊದಲ ಬಾರಿಗೆ ರಾಹುಲ್ ಗಾಂಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿತ್ತು. ತಮಿಳುನಾಡಿಗೆ ಹೋಗುವ ಮಾರ್ಗಮಧ್ಯೆ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿಯನ್ನು ವಿಮಾನ ನಿಲ್ದಾಣದಲ್ಲಿ ಈ ಇಬ್ಬರೂ ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿದರು. ರಾಜಕೀಯ ವಿದ್ಯಮಾನಗಳ ಬಗ್ಗೆ, ಅದರಲ್ಲೂ ಮುಖ್ಯವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಏನಾದರೂ ಚರ್ಚೆ ನಡೆಯಿತಾ? ಹೈಕಮಾಂಡ್ ಸೂಚನೆ ಏನಿರಬಹುದು? ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿತ್ತು. ಆದರೆ, ಅಸಲಿಗೆ ಈ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆಗಳೇ ನಡೆದಿಲ್ಲ ಎಂಬ ಮಾಹಿತಿ ಈಗ ಹೊರಬಿದ್ದಿದೆ. ಹಾಗಾದರೆ ಆ 15 ನಿಮಿಷಗಳ ಭೇಟಿಯಲ್ಲಿ ನಡೆದಿದ್ದೇನು? ಸಂಪೂರ್ಣ ವಿವರಣೆಗೆ ಈ ವಿಡಿಯೋ ನೋಡಿ.

ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಮೊದಲ ಬಾರಿಗೆ ರಾಹುಲ್ ಗಾಂಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿತ್ತು. ತಮಿಳುನಾಡಿಗೆ ಹೋಗುವ ಮಾರ್ಗಮಧ್ಯೆ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿಯನ್ನು ವಿಮಾನ ನಿಲ್ದಾಣದಲ್ಲಿ ಈ ಇಬ್ಬರೂ ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿದರು. ರಾಜಕೀಯ ವಿದ್ಯಮಾನಗಳ ಬಗ್ಗೆ, ಅದರಲ್ಲೂ ಮುಖ್ಯವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಏನಾದರೂ ಚರ್ಚೆ ನಡೆಯಿತಾ? ಹೈಕಮಾಂಡ್ ಸೂಚನೆ ಏನಿರಬಹುದು? ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿತ್ತು. ಆದರೆ, ಅಸಲಿಗೆ ಈ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆಗಳೇ ನಡೆದಿಲ್ಲ ಎಂಬ ಮಾಹಿತಿ ಈಗ ಹೊರಬಿದ್ದಿದೆ. ಹಾಗಾದರೆ ಆ 15 ನಿಮಿಷಗಳ ಭೇಟಿಯಲ್ಲಿ ನಡೆದಿದ್ದೇನು? ಸಂಪೂರ್ಣ ವಿವರಣೆಗೆ ಈ ವಿಡಿಯೋ ನೋಡಿ.