ಲೋಕಸಭಾ ಚುನಾವಣೆ: ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಗೆಲ್ಲುವ ಭರವಸೆ ಇದೆ ಎಂದ ಡಿಕೆಶಿ
x

ಲೋಕಸಭಾ ಚುನಾವಣೆ: ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಗೆಲ್ಲುವ ಭರವಸೆ ಇದೆ ಎಂದ ಡಿಕೆಶಿ

ರಾಜಕೀಯದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿದ್ದು, ಜನರ ಮನೋಭಾವದಲ್ಲಿ ಗೋಚರ ಬದಲಾವಣೆಗಳಾಗಿವೆ. ಕರಾವಳಿ ಪ್ರದೇಶದ ಕ್ಷೇತ್ರದಿಂದ ಗೆಲ್ಲುವ ಸಾಧ್ಯತೆ ಇರುವುದರಿಂದ ಈ ಬಾರಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.


ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಕರಾವಳಿ ಭಾಗದಲ್ಲಿ ಗೆಲ್ಲುವ ಸಾಧ್ಯತೆಗಳಿವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಶನಿವಾರ ಅಡ್ಯಾರ್‌ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಬಂದಿದ್ದ ಸಂದರ್ಭದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿದ್ದು, ಜನರ ಮನೋಭಾವದಲ್ಲಿ ಗೋಚರ ಬದಲಾವಣೆಗಳಾಗಿವೆ. ಕರಾವಳಿ ಪ್ರದೇಶದ ಕ್ಷೇತ್ರದಿಂದ ಗೆಲ್ಲುವ ಸಾಧ್ಯತೆ ಇರುವುದರಿಂದ ಈ ಬಾರಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಶಿವಕುಮಾರ್ ಹೇಳಿದ್ದಾರೆ.

ಕರಾವಳಿ ಕರ್ನಾಟಕದಲ್ಲಿ ನಿರುದ್ಯೋಗ ಮತ್ತು ವ್ಯಾಪಾರ ಕುಂಠಿತ ಸಮಸ್ಯೆಗಳ ಬಗ್ಗೆ ಆಡಳಿತಾರೂಢ ಕಾಂಗ್ರೆಸ್‌ ಗಮನ ಹರಿಸಲಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿಯು ದೀರ್ಘಕಾಲದಿಂದ ಅಸಮಾಧಾನ ಹೊಂದಿದ್ದರೂ ಈ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವಲ್ಲಿ ವಿಫಲವಾಗಿದೆ. ಕರಾವಳಿ ಪ್ರದೇಶದಲ್ಲಿ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಲು ಕಾಂಗ್ರೆಸ್ ಹೊಸ ಆಲೋಚನೆಗಳು ಮತ್ತು ವಿಶೇಷ ಯೋಜನೆಗಳನ್ನು ರೂಪಿಸಲಿದೆ ಎಂದು ಅವರು ಹೇಳಿದರು.

ನಗರದ ಸೇಂಟ್ ಗೆರೋಸಾ ಶಾಲೆಯಲ್ಲಿ ಶಿಕ್ಷಕಿಯನ್ನು ಹುದ್ದೆಯಿಂದ ವಜಾಗೊಳಿಸಿದ ವಿವಾದದ ಕುರಿತು ಕಾನೂನು ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಅಲ್ಪಸಂಖ್ಯಾತ ಸಮುದಾಯಗಳಿಗೆ ನಿಧಿ ಹಂಚಿಕೆ ಮಾಡುವುದನ್ನು ಸಮರ್ಥಿಸಿಕೊಂಡ ಅವರು, ಇದು ಸಮಾನ ಅಭಿವೃದ್ಧಿಗೆ ಅಗತ್ಯವಾದ ಹೆಜ್ಜೆ ಎಂದು ಹೇಳಿದರು.

ಪಕ್ಷದ ಆಂತರಿಕ ಸಮೀಕ್ಷೆಯ ಫಲಿತಾಂಶವನ್ನು ಪಡೆದ ನಂತರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

Read More
Next Story