ಸುಮಲತಾ ಅಂಬರೀಶ್‌ಗೆ ಮಂಡ್ಯ ಟಿಕೆಟ್ ಮಿಸ್: JDSಗೆ 3 ಕ್ಷೇತ್ರ ಬಿಟ್ಟುಕೊಟ್ಟ BJP
x

ಸುಮಲತಾ ಅಂಬರೀಶ್‌ಗೆ ಮಂಡ್ಯ ಟಿಕೆಟ್ ಮಿಸ್: JDSಗೆ 3 ಕ್ಷೇತ್ರ ಬಿಟ್ಟುಕೊಟ್ಟ BJP


ಲೋಕಸಭೆ ಚುನಾವಣೆಯ ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ಗೆ ಕಗ್ಗಾಂಟಾಗಿದ್ದ ಕ್ಷೇತ್ರಗಳನ್ನು ಕೊನೆಗೂ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅಸವರಿಗೆ ನಿರಾಸೆಯಾಗಿದೆ.

ಈ ಕುರಿತು ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಮಾಹಿತಿ ನೀಡಿದ್ದು, ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.

ʼʼಮಂಡ್ಯ, ಕೋಲಾರ, ಹಾಸನ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದೇವೆ. ಇಂದು ರಾತ್ರಿ ಅಥವಾ ನಾಳೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆʼʼ ಎಂದು ಮಾಹಿತಿ ನೀಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಶ್ ಗೆ ಬಿಗ್ ಶಾಕ್ ಎದುರಾಗಿದ್ದು, ಮುಂದೆ ಅವರು ಪಕ್ಷೇತರವಾಗಿ ಚುನಾವಣೆಗೆ ಸ್ಪರ್ಧೆ ಮಾಡುತ್ತಾರಾ ಅಥವಾ ಬೇರೆ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎನ್ನುವ ಪ್ರಶ್ನೆಗಳು ಮೂಡಿವೆ..

Read More
Next Story