ಕನ್ನಡದ ಪ್ರಚಂಡ ಕುಳ್ಳ, ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ!
x
ಕನ್ನಡದ ಹಿರಿಯ ನಟ ದ್ವಾರಕೀಶ್‌ ಇಹಲೋಕ ತ್ಯಜಿಸಿದ್ದಾರೆ.

ಕನ್ನಡದ ಪ್ರಚಂಡ ಕುಳ್ಳ, ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ!

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರರು ಮಂಗಳವಾರ ಇಹಲೋಕ ತ್ಯಜಿಸಿದ್ದಾರೆ.


Click the Play button to hear this message in audio format

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ(ಏ.16) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

‘ರಾತ್ರಿ ಸ್ವಲ್ಪ ಅನಾರೋಗ್ಯವಾಗಿತ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ದ್ವಾರಕೀಶ್ ಪುತ್ರ ಯೋಗಿ ತಿಳಿಸಿದ್ದಾರೆ.

ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದ ದ್ವಾರಕೀಶ್ ನಿರ್ದೇಶಕರಾಗಿ, ನಿರ್ಮಾಪಕರಾಗಿಯೂ ಯಶಸ್ಸು ಕಂಡಿದ್ದರು. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಹಲವು ದಿಗ್ಗಜರ ಜೊತೆ ನಟಿಸಿದ್ದರು. ಡಾ ರಾಜ್‌ ಕುಮಾರ್‌, ವಿಷ್ಣುವರ್ಧನ್‌ ಅವರಂಥ ಹಿರಿಯ ನಟರ ಸಿನಿಮಾಗಳನ್ನು ನಿರ್ಮಿಸಿದ್ದಲ್ಲದೆ, ಅವರೊಂದಿಗೆ ನಟಿಸಿದ ಹೆಗ್ಗಳಿಕೆಯೂ ದ್ವಾರಕೀಶ್‌ ಅವರದ್ದಾಗಿತ್ತು. ಹಾಸ್ಯ ಕಲಾವಿದರಾಗಿ, ಪೋಷಕ ನಟರಾಗಿ, ಹೀರೋ ಆಗಿ, ಚಿತ್ರ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅವರು ಕನ್ನಡ ಸಿನಿಮಾ ರಂಗಕ್ಕೆ ನೀಡಿದ ಕೊಡುಗೆ ಅಪಾರ. ʼದ್ವಾರಕೀಶ್‌ ಚಿತ್ರʼ ಎಂಬ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿ, ಅದರ ಮೂಲಕ ಹಲವು ನಟರನ್ನು ಪರಿಚಯಿಸಿದ್ದೇ ಅಲ್ಲದೆ, ವಿಷ್ಣುವರ್ಧನ್‌ ಅವರಂತಹ ನಟರ ವೃತ್ತಿಬದುಕಿಗೆ ಬ್ರೇಕ್‌ ಕೊಟ್ಟವರು ದ್ವಾರಕೀಶ್.‌

ಕನ್ನಡ ಹಿರಿತೆರೆ ಮತ್ತು ಕಿರುತೆರೆಯಷ್ಟೇ ಅಲ್ಲದೆ, ಹಿಂದಿ ಮತ್ತು ತಮಿಳು ಚಿತ್ರರಂಗದಲ್ಲಿಯೂ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದು ಅವರು, ಕನ್ನಡದ ಆಚೆಗೂ ಹೆಸರು ಮಾಡಿದ್ದರು.

Read More
Next Story