ವಿಧಾನಸೌಧದಲ್ಲಿ ಇಂದು ಸಂಜೆ 4 ಗಂಟೆಗೆ ಆರ್‌ಸಿಬಿ ಆಟಗಾರರಿಗೆ ಭವ್ಯ ಸನ್ಮಾನ
x

ವಿಧಾನಸೌಧದಲ್ಲಿ ಇಂದು ಸಂಜೆ 4 ಗಂಟೆಗೆ ಆರ್‌ಸಿಬಿ ಆಟಗಾರರಿಗೆ ಭವ್ಯ ಸನ್ಮಾನ

ಸನ್ಮಾನ ನಂತರ ವಿಜಯೋತ್ಸವ ಪಥಸಂಚಲನ ನಡೆಯಲಿದೆ. ಪಥಸಂಚಲನ ವಿಧಾನಸೌಧದಿಂದ ಆರಂಭವಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಸಾಗಲಿದೆ ಎಂದು ಹೇಳಲಾಗಿದೆ.


ಐಪಿಎಲ್ 2025 ಟ್ರೋಫಿಯನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆಟಗಾರರಿಗೆ ಇಂದು (ಜೂನ್ 4) ಸಂಜೆ 4 ಗಂಟೆಗೆ ವಿಧಾನಸೌಧ ಗ್ರಾಂಡ್ ಸ್ಟೆಪ್ ಬಳಿ ರಾಜ್ಯ ಸರ್ಕಾರದ ವತಿಯಿಂದ ಭವ್ಯ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿರುವ ಆರ್‌ಸಿಬಿ ತಂಡ, ಐತಿಹಾಸಿಕ ಜಯ ಸಾಧಿಸಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಸಾಧನೆಯನ್ನು ಗೌರವಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಎಲ್ಲಾ ಆಟಗಾರರು, ಕೋಚ್‌ಗಳು ಹಾಗೂ ತಂಡದ ಸಿಬ್ಬಂದಿ ಭಾಗವಹಿಸಲಿದ್ದಾರೆ.

ಸನ್ಮಾನ ನಂತರ ವಿಜಯೋತ್ಸವ ಪಥಸಂಚಲನ ನಡೆಯಲಿದೆ. ಪಥಸಂಚಲನ ವಿಧಾನಸೌಧದಿಂದ ಆರಂಭವಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಸಾಗಲಿದೆ. ಸಾವಿರಾರು ಅಭಿಮಾನಿಗಳು ತಮ್ಮ ನೆಚ್ಚಿನ ತಂಡವನ್ನು ನೋಡಲು ರಸ್ತೆಗಳ ಪಕ್ಕದಲ್ಲಿ ಜಮಾಯಿಸುವ ನಿರೀಕ್ಷೆಯಿದೆ. ನಗರದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಸಂಭ್ರಮವನ್ನು ಟಿವಿ ಹಾಗೂ ಆನ್‌ಲೈನ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ.

ಇಂದು ಬೆಂಗಳೂರು ನಗರವು ಕೆಂಪು-ಕಪ್ಪು ಬಣ್ಣದಲ್ಲಿ ಮೆರೆಯಲಿದ್ದು, 'ಈ ಸ ಕಪ್ ನಮ್ದೆ' ಎಂಬ ಘೋಷಣೆ ಎಲ್ಲೆಡೆ ಪ್ರತಿಧ್ವನಿಸುವ ಸಾಧ್ಯತೆ ಇದೆ.

Read More
Next Story