ಸುಮಲತಾರಿಗೆ ಉಪಕಾರ ತೀರಿಸುವ ಮನಸ್ಸಿದ್ದರೆ ಸೂಕ್ತ ತೀರ್ಮಾನ ಮಾಡಲಿ: ಡಿಕೆಶಿ
x

ಸುಮಲತಾರಿಗೆ ಉಪಕಾರ ತೀರಿಸುವ ಮನಸ್ಸಿದ್ದರೆ ಸೂಕ್ತ ತೀರ್ಮಾನ ಮಾಡಲಿ: ಡಿಕೆಶಿ


ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಸಹಾಯ ಮಾಡಿದವರ ಉಪಕಾರ ತೀರಿಸಬೇಕು ಎಂದಿದ್ದರೆ ಸೂಕ್ತ ತೀರ್ಮಾನ ಮಾಡಲಿ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ನಿರ್ಧಾರದ ಕುರಿತು ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಏ.3ರಂದು ಮಂಡ್ಯದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಕಾಂಗ್ರೆಸ್ ನಿಂದ ಆಹ್ವಾನವಿದೆ. ನಾನು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ʼʼಕಳೆದ ಲೋಕಸಭಾ ಚುನಾವಣೆಯಲ್ಲಿ ಅವರಿಗೂ ಜೆಡಿಎಸ್ ನಾಯಕರಿಗೂ ನಡೆದ ಮಾತಿನ ಕಾಳಗ ಹಾಗೂ ಸ್ವಾಭಿಮಾನದ ಹೆಸರಲ್ಲಿ ಮತಯಾಚನೆ ಮಾಡಿದ್ದಕ್ಕೆ ಅವರು ಬದ್ಧರಿದ್ದರೆ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಆಲೋಚನೆ ಮಾಡಬಹುದು. ಈಗ ಅವರು ಬಿಜೆಪಿ ಜತೆ ಗುರುತಿಸಿಕೊಂಡಿದ್ದಾರೆ. ಅವರ ಬದ್ಧತೆ ಬದಲಾಗದಿದ್ದರೆ ನಾವು ಏನೂ ಮಾಡಲು ಸಾಧ್ಯವಿಲ್ಲʼʼ ಎಂದರು.

ಕಾಂಗ್ರೆಸ್‌ನಿಂದ ಆಹ್ವಾನವಿದೆ, ನಾನು ಇನ್ನೂ ತೀರ್ಮಾನ ಮಾಡಿಲ್ಲ ಎಂಬ ಸುಮಲತಾ ಹೇಳಿಕೆ ವಿಚಾರವಾಗಿ ಕೇಳಿದಾಗ, ʼʼಸುಮಲತಾ ಅವರಿಗೆ ಸಹಾಯ ಮಾಡಿದವರ ಉಪಕಾರ ತೀರಿಸಬೇಕು ಎಂದಿದ್ದರೆ ಅವರು ತೀರ್ಮಾನ ಮಾಡಲಿ, ಸುಮಲತಾ ಅಂಬರೀಶ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ನಿರ್ಧಾರವನ್ನು ಸ್ಥಳೀಯ ಮುಖಂಡರಿಗೆ ಬಿಡುತ್ತೇವೆ. ಸ್ಥಳೀಯ ಮಟ್ಟದಲ್ಲಿ ಎಲ್ಲರೂ ಒಪ್ಪಿದಾಗ ಹೈಕಮಾಂಡ್ ಯಾರನ್ನೂ ಕೈಬಿಡುವುದಿಲ್ಲʼʼ ಎಂದು ತಿಳಿಸಿದ್ದಾರೆ.

Read More
Next Story